



ಕಾರ್ಕಳ: ಮಹಿಳೆಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕೆದಿಂಜೆ ಕುಂಟಲ ಗುಂಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಹರಿಣಾಕ್ಷಿ 31 ವರ್ಷ ಬಾವಿಗೆ ಬಿದ್ದ ಮಹಿಳೆ. ಸುಮಾರು 35 ಅಡಿ ಆಳದ ಬಾವಿಗೆ ಮಹಿಳೆ ಕಾಲುಜಾರಿ ಆಕಸ್ಮಿಕವಾಗಿ ಬಿದ್ದಿದ್ದು ಕಾರ್ಕಳ ಅಗ್ನಿಶಾಮಕ ದಳದವರು ಹಾಗೂ ಕಾರ್ಕಳ ಆರಕ್ಷಕ ಠಾಣೆಯವರು ಬಾವಿಗೆಳೆದ್ದು ಮಹಿಳೆಯನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೊನಿಸ್, ಅಗ್ನಿಶಾಮಕ ಸಿಬ್ಬಂದಿಗಳಾದ ಹರಿಪ್ರಸಾದ್ ಶೆಟ್ಟಿಗಾರ್, ಜಯ ಮೂಲ್ಯ ,ಮನೋಹರ್ ಪ್ರಸಾದ್, ಹಸನ್ ಸಾಬ್ ಮುಲ್ತಾನಿ, ಸದಾನಂದ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.