



ಕಾರ್ಕಳ : ತಾಲೂಕಿನ ತಹಶೀಲ್ದಾರ್ ಆಗಿ ನರಸಪ್ಪ ಅವರು ನ. 20 ರಂದು ಅಧಿಕಾರ ಸ್ವೀಕರಿಸಿದರು. ಮೂಲತಃ ರಾಯಚೂರಿನ ನರಸಪ್ಪ ಅವರು ಈ ಮೊದಲು ಬೀದರ್ ನಲ್ಲಿ ಪ್ರೊಬೆಷನರಿ ತಹಶೀಲ್ದಾರ್ ಆಗಿ ಕರ್ತವ್ಯ ಸಲ್ಲಿಸಿದ್ದರು. ಇದೀಗ ಕಾರ್ಕಳ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಕಾರ್ಕಳದಲ್ಲಿ ತಹಶೀಲ್ದಾರ್ ಆಗಿದ್ದ ಬಿ. ಅನಂತಶಂಕರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಹಶೀಲ್ದಾರ್ ಆಗಿ ವರ್ಗಾವಣೆ ಹೊಂದಿದ್ದು, ತೆರವಾದ ಸ್ಥಾನಕ್ಕೆ ನರಸಪ್ಪ ನೇಮಕಗೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.