



ಉಡುಪಿ: ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಕಾಬಂಧಿ ಮಾಡಲಾಗಿದೆ. ಜಿಲ್ಲೆಯಲ್ಲಿ ಸಾರ್ವನಿಕವಾಗಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನಗರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ತಿಳಿಸಿದ್ದಾರೆ.
ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6ಗಂಟೆಯವರೆಗೆ ನಗರದ ಪ್ರಮುಖ ನಗರ, ಜಂಕ್ಷನ್ ಗಳಲ್ಲಿ ಪೊಲೀಸ್ ಕಣ್ಗಾವಲು ಇರಲಿದೆ. ಇದಕ್ಕಾಗಿ 800 ಪೊಲೀಸರ ನಿಯೋಜನೆ, 25 ಕಡೆ ಚೆಕ್ಪೋಸ್ಟ್ ಹಾಗೂ 46 ಕಡೆ ಪಿಕೆಟಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. 70 ಅಧಿಕಾರಿಗಳು, 5 ಡಿಆರ್ ಪೊಲೀಸ್ ತಂಡ, 1 ಕ್ಷಿಪ್ರ ಕಾರ್ಯಾಚರಣಾ ಪಡೆ, 3 ಇಂಟರ್ಸೆಪ್ಟರ್ ಸಹಿತ 800 ಮಂದಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.