



ಕಾರ್ಕಳ, : ಮುಂದಿನ ರಾಜ್ಯೋತ್ಸ ಪ್ರಶಸ್ತಿ ಆಯ್ಕೆ ವೇಳೆ ಈ ಬಾರಿ ಪಾರದರ್ಶಕತೆ ಕಾಯ್ದುಕೊಂಡಿದ್ದು. ಪ್ರತಿಭೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಮುಂದಿನ ವರುಷ ಅರ್ಜಿ ಸ್ವೀಕರಿಸದೆ ಪ್ರಶಸ್ತಿ ಗೆ ಆಯ್ಕೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು , ಆಯ್ಕೆ ಪ್ರಕ್ರೀಯಾ ಸಮಿತಿಯೇ ರಾಜ್ಯದಾದ್ಯಂತ ಸಂಚರಿಸಿ ಎಲೆಮರೆಯ ಕಾಯಿಯ ಅರ್ಹ ಪ್ರತಿಭೆಗಳನ್ನು ಆರಿಸುವ ಕಾರ್ಯ. ನಡೆಸಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಪತ್ರಕರ್ತೆ ಡಾ.ಯು.ಬಿ ರಾಜಲಕ್ಷ್ಮಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಇವರುಗಳಿಗೆ ಕಾರ್ಕಳದ ಹೊಟೇಲ್ ಕಟೀಲ್ ಇಂಟರ್ ನ್ಯಾಶನಲ್ ಶಾಂಭವಿ ಫಾರ್ಮ್ ಹೌಸ್ ನಲ್ಲಿ ಶನಿವಾರ ನಡೆದ ಹುಟ್ಟೂರ ಪೌರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಕಾರ್ಕಳದ ಹಿರಿಯ ನ್ಯಾಯವಾದಿ.. ಕೆ. ವಿಜಯ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. , ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅಭಿನಂದನ ಭಾಷಣ ನೆರವೇರಿಸಿದರು. ಹಿರಿಯ ಉದ್ಯಮಿ ಬೋಳ ಪ್ರಭಾಕರ ಕಾಮತ್, ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ| ಮಂಜುನಾಥ ಕೋಟ್ಯಾನ್, ಬಿಲ್ಲವ ಸಮಾಜ ಅಧ್ಯಕ್ಷ ಡಿ. ಆರ್. ರಾಜು, ಉದ್ಯಮಿಗಳಾದ ಮಹೇಶ್ ಶೆಟ್ಟಿ, ಕುಡುಪುಲಾಜೆ, ಕನ್ನಡ ಚಲನಚಿತ್ರ ನಟಿಯರಾದ ದುನಿಯ ರಶ್ಮಿ, ಬಾವನಾ ಮಾತನಾಡಿದರು.ಕರಿಯಣ್ಣ ಶೆಟ್ಟಿ, ಶಿವರಾಮ ಶೆಟ್ಟಿ ಅಜೆಕಾರು ಮಾತನಾಡಿದರು ಅಪ್ಸರಾರೋಹಿತ್ ಕುಮಾರ್ ಕಟೀಲ್, ಅಭಿನಂದನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನಿತರಿಬ್ಬರನ್ನು ಗೌರವಿಸಲಾಯಿತು .ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ ಸ್ವಾಗತಿಸಿದರು. ರಾಜೇಂದ್ರ ಭಟ್ ಕರ್ಯಕ್ರಮ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.