logo
WhatsApp Image 2026-04-02 at 14.46.04.jpeg
hindalco everlast.jpeg

ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ . ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ.

ಟ್ರೆಂಡಿಂಗ್
share whatsappshare facebookshare telegram
23 Oct 2021
post image

ಕಾರ್ಕಳ: ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ . ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು .ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಚ್ಚಾವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು ವಿವಿಧ ಕೈಗಾರಿಕೆ ಕಟ್ಟಡ ಗಳಿಗೆ ಪೂರೈಸುವ,ಕ್ವಾರಿ ಉದ್ಯಮವು ಲಕ್ಷಾಂತರ ಜನರಿಗೆ ನೇರ ಹಾಗು ಪರೊಕ್ಷವಾಗಿ ಉದ್ಯೋಗ ವನ್ನು ನೀಡಿವೆ. ಆದರೆ ಸರಕಾರದ ಕೆಲವು ಅಸಮರ್ಪಕವಾದ ಕಾನೂನುಗಳಿಂದ ಕಚ್ಚಾವಸ್ತುಗಳ ಸಾಗಾಣಿಕೆ ಹಾಗೂ ಕಲ್ಲುಗಣಿಗಾರಿಕೆಗಳಿಗೆ ತೊಂದರೆಯಾಗುತಿದ್ದು, ಸರಕಾರದ ಕಾಮಗಾರಿಗಳನ್ನು ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆ ದಾರರಿಗು ಸಮಸ್ಯೆ ಯಾಗುತಿದ್ದು,ಅದಕ್ಕಾಗಿ ಸರಕಾರ ಕಾನೂನು ತೊಡಕುಗಳನ್ನು ನಿವಾರಿಸಿ ಕಚ್ಚಾವಸ್ತುಗಳನ್ನು ಪೂರೈಸಲು ಅನುವು ಮಾಡಲು ಸರಕಾರ ಯೋಗ್ಯ ರೀತಿಯಲ್ಲಿ ಸ್ಪಂದಿಸಬೇಕು ಎಂದರು. ಎಲ್ಲ ಗುತ್ತಿಗೆದಾರರು ಎಲ್ಲಾ ವಲಯದ ಕ್ರಷರ್ ಗಳಿಂದ ಪೂರೈಕೆಯಾಗುವ ಕಚ್ಚಾವಸ್ತುಗಳನ್ನು ಪೂರೈಸುವ ಕೈಗಾರಿಗಳಿಗು ತನ್ನ ಚೌಕಟ್ಟಿನೊಳಗೆ ಗಣಿಗಾರಿಗೆ ಕಾನೂನು ಸ್ನೇಹಿಯಾಗಿ ನಿರ್ವಹಿಸಿ ಸರಕಾರಕ್ಕೆ ಸಂದಾಯವಾಗುವ ರಾಜಸ್ವವು ಹೆಚ್ಚುತ್ತದೆ , ಕ್ವಾರಿ ಕ್ರಷರ್ ಉದ್ಯಮದ ಬೇಡಿಕೆ ಏನೆಂದರೆ ಕಾನೂನು ಚೌಕಟ್ಟಿನೊಳಗೆ ಉದ್ಯಮ ನಡೆಸಲು ಅವಕಾಶ ಕೊಡಿ, ಎಲ್ಲರೂ ಕಾನೂನು ಬದ್ದವಾಗಿ ಉದ್ಯಮ ನಡೆಸಲು ತಯಾರಿದ್ದಾರೆ, ಅದಕ್ಕೆ ಪೂರಕವಾದ ನಿಯಮಗಳಿಲ್ಲ ,ಆದ್ದರಿಂದ ಗಣಿಗಾರಿಕೆ ಹಿನ್ನಡೆ ಯಾಗುತ್ತಿದೆ ಎಂದರು. ಆದರೆ ಅಕ್ರಮ ಗಣಿಗಾರಿಕೆ ಮಾಡುತಿದ್ದಾರೆ ಎಂದು ಆರೋಪ ಹೋರಿಸುವುದು ಸರಿಯಲ್ಲ.ಆದರೆ ಸರಕಾರದ ಕಾನೂನಿನಲ್ಲಿ ಸಮಸ್ಯೆ ಇದೆ ಆದ್ದರಿಂದ ಮುಂದಿನ ಮೂರು ತಿಂಗಳ ಒಳಗೆ ಕ್ರಷರ್ ಹಾಗೂ ಕ್ವಾರಿಗಳಿಗಿರುವ ಸಮಸ್ಯೆ ಬಗೆಹರಿಸಲಾಗುವುದು ಎಂದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.