



ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ (ಜ.22) ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.