



ಬ್ರಹ್ಮಾವರ:
ಮುಂಬೈಗೆಂದು ಮನೆಯಿಂದ ಹೊರಟ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ನಿವಾಸಿ 67ವರ್ಷದ ಸುಂದರ್ ಆಚಾರ್ಯ ನಾಪತ್ತೆಯಾದ ವ್ಯಕ್ತಿ. ಇವರು ಆ.5ರಂದು ಮುಂಬೈನಲ್ಲಿರುವ ಅಣ್ಣ ದೇವದಾಸ ಹೂವಯ್ಯ ಅವರಿಗೆ ಯಾವುದೋ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ, ತಾನು ಮುಂಬೈಗೆ ಬರುವುದಾಗಿ ತಿಳಿಸಿದ್ದರು. ಆದರೆ, ಆ ನಂತರ ಅವರು ಮುಂಬೈಗೂ ಹೋಗದೆ, ಮನೆಗೂ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಮನೆಯವರು ಎಲ್ಲ ಕಡೆ ಹುಡುಕಾಡಿದರೂ ಈವರೆಗೂ ಅವರ ಸುಳಿವು ಪತ್ತೆಯಾಗಿಲ್ಲ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.