



ಉಡುಪಿ: ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರು ಇದೇ ಜುಲೈ 19ರಂದು ಹುಟ್ಟೂರಾದ ಉಡುಪಿಯ ಬೆಳ್ಳಂಪಳ್ಳಿಗೆ ಆಗಮಿಸಲಿದ್ದಾರೆ. ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜಯಗಳಿಸಲೆಂದು ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಅಂದು ಸಂಜೆ 5.30ಕ್ಕೆ ಬೆಳ್ಳಂಪಳ್ಳಿಯ ಭೂತರಾಜ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಲಿದ್ದಾರೆ. ಬಳಿಕ ಸಿನಿ ಶೆಟ್ಟಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿಯ ಮುಕ್ತೇಸರರಾದ ಶುಭಕರ ಬಳ್ಳಾಲ್, ಸುರೇಶ್ ಬಳ್ಳಾಲ್ ಹಾಗೂ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.