



ಬೆಂಗಳೂರು: ಶಕ್ತಿ ಯೋಜನೆಗೆ ಜೂ.11 ರಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಅವರು ನಾಳೆ ಸಿಎಂ ‘ಶಕ್ತಿ ಯೋಜನೆ ಉದ್ಘಾಟನೆ ಮಾಡಲಿದ್ದು. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗುತ್ತೇವೆ. ಬೇರೆ ಪ್ರದೇಶಗಳಿಗೆ ಹೋಗುವ ಮಹಿಳೆಯರು ಬಸ್ನಲ್ಲಿ ಕುಳಿತಿರುತ್ತಾರೆ. ಆ ಬಸ್ಗೆ ಸಿಎಂ ಹಸಿರು ನಿಶಾನೆ ತೋರಿಸಿ ಚಾಲನೆ ಕೊಡುತ್ತಾರೆ. ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ಜನತೆಗೆ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು, ಅಲ್ಲಿಯವರೆಗೆ ತಮ್ಮಲ್ಲಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.