



ಶ್ರಿನಗರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಮ್ಮು ಮತ್ತು ಕಾಶ್ಮೀರದ ಮುಖಂಡರ ಹಾಗೂ ಕಾರ್ಯಕರ್ತರ ರಕ್ತ ಚೆಲ್ಲುತ್ತೇವೆ ಎಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಟಿಆರ್ಎ ಬೆದರಿಕೆ ಹಾಕಿದೆ.
ವರದಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆ 30 ಆರ್ಎಸ್ಎಸ್ ನಾಯಕರು ಮತ್ತು ಕಾರ್ಯಕರ್ತರ ಗುರಿಯಾಗಿಸಿ ಪಟ್ಟಿ ಬಿಡುಗಡೆ ಮಾಡಿದೆ. ಪೋಸ್ಟರ್ನಲ್ಲಿ, ಟಿಆರ್ಎ ಜಮ್ಮು ಮತ್ತು ಕಾಶ್ಮೀರದ ಆರ್ಎಸ್ಎಸ್ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತದೆ ಎಂದು ಹೇಳಿಕೊಂಡಿದೆ. ಈ ಹಿಂದೆ ಕಾಶ್ಮೀರ ಪಂಡಿತರ ಹತ್ಯೆ ಮಾಡುವುದಾಗಿಯೂ ಟಿಆರ್ಎ ಬೆದರಿಕೆ ಹಾಕಿತ್ತು.
ಪಾಕಿಸ್ತಾನ ಮೂಲದ ಟಿಆರ್ಎ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದೆ. ಅಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್ನನ್ನು ಉಗ್ರನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಪಾಕಿಸ್ತಾನ ಮೂಲದ ನಿಷೇತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಶಾಖೆಯಾದ ದಿ ರೆಸಿಸ್ಟೆನ್ಸ್ ್ರಂಟ್ ಮತ್ತು ಅದರ ವ್ಯಾಪ್ತಿಯಲ್ಲಿರುವ ಇತರೆ ಸಂಘಟನೆಗಳನ್ನು ನಿಷೇಧಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.