



ಶಂಕರನಾರಾಯಣ: ಅತೀಯಾದ ಮದ್ಯಸೇವನೆಯಿಂದಾಗಿ ಹಠಾತ್ ಆಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ಮೇ.6ರಂದು ಸಂಜೆ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ನಿವಾಸಿ 40 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಅತೀಯಾದ ಮದ್ಯಪಾನ ಹಾಗೂ ಸರಿಯಾಗಿ ಆಹಾರ ಸೇವನೆ ಮಾಡದೆ ದೈಹಿಕ ಬಳಲಿದ್ದರು. ಇದೇ ಕಾರಣದಿಂದ ಮೇ. 6ರಂದು ಸಂಜೆ ಹಠಾತ್ ಆಗಿ ಮೃತಪಟ್ಟಿದ್ಧಾರೆ. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.