logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಗೆ ಪ್ಲಾನ್: ಎನ್‌ ಐ ಎ ತನಿಖೆಯಲ್ಲಿ ಬಯಲು

ಟ್ರೆಂಡಿಂಗ್
share whatsappshare facebookshare telegram
18 Oct 2023
post image

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ಎನ್‌ ಐ ಎ ತನಿಖೆಯಲ್ಲಿ ಮತ್ತೊಂದು ಭಯಾನಕ ಅಂಶವನ್ನು ಬಾಯಿಬಿಟ್ಟಿದ್ದಾನೆ.

ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಿದ್ದೇವು ಎಂದು ಹೇಳಿದ್ದು, ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ. ಇದೀಗ ಉಡುಪಿ ಮಠ ಹಾಗೂ ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ.

ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ರೆ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್​ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿರುವುದು ಎನ್‌ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.