



ಚಾಮರಾಜನಗರ: ಹುಲಿ ಯೋಜನೆ ಘೋಷಣೆಯಾಗಿ ಇಂದಿಗೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ಆಗಮಿಸಿದ್ದಾರೆ.
ಶನಿವಾರವೇ ಮೈಸೂರಿಗೆ ಆಗಮಿಸಿದ್ದ ಮೋದಿ ಇಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ. ಸಫಾರಿ ನಡೆಸಿದ ಬಳಿಕ ತಮಿಳುನಾಡಿನ ಮಧುಮಲೈ ಅರಣ್ಯಕ್ಕೂ ಭೇಟಿ ಕೊಡಲಿದ್ದಾರೆ. ಹೀಗಾಗಿ ಮಧುಮಲೈ ಅರಣ್ಯದಲ್ಲೂ ಭರ್ಜರಿ ಸಿದ್ದತೆ ನಡೆದಿದೆ. 22 ಕಿ.ಮೀ. ಸಫಾರಿ ನಡೆಸಿ ಗಡಿಭಾಗದ ಕೆಕ್ಕನಹಳ್ಳ ಚೆಕ್ಪೋಸ್ಟ್ ಮೂಲಕ ತಮಿಳುನಾಡಿನ ಮಧುಮಲೈ ಅರಣ್ಯಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಲಿದ್ದಾರೆ. ಬೆಳಗ್ಗೆ 9.35ಕ್ಕೆ ಆನೆ ಶಿಬಿರದಲ್ಲಿ `ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಗೆ ಅಭಿನಂದಿಸಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.