



ಪುತ್ತೂರು; ಪುತ್ತೂರಿನಲ್ಲಿ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಏಳು ಮಂದಿ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ವಿಚಾರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಯಾಳು ನರಿಮೊಗರಿನ ಅವಿನಾಶ್ ನೀಡಿದ ದೂರಿನ ಮೇರೆಗೆ ಡಿವೈಎಸ್ಪಿ ಪುತ್ತೂರು,PSI ಪುತ್ತೂರು (Puttur) ಗ್ರಾಮಾಂತರ ಠಾಣೆ, ಹರ್ಷಿತ್PC, ಪುತ್ತೂರು ಗ್ರಾಮಾಂತರ ಠಾಣೆ ರವರುಗಳ ವಿರುದ್ಧ ಪುತ್ತೂರು ನಗರ ಠಾಣೆ Cr no.39/23 u/s 323,324,506 r/w 34IPC ರಂತೆ ಪ್ರಕರಣ ದಾಖಲಾಗಿದೆ.
ಪ್ರಕರಣ ದ ತನಿಖೆಯನ್ನು DSP ಬಂಟ್ವಾಳ ರವರಿಗೆ ವಹಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲ PSI ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಹರ್ಷಿತ್ PC ರವರುಗಳನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ ಹಾಗೂ DSP ಪುತ್ತೂರು ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಎಸ್ಸಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.