



ಬ್ರಹ್ಮಾವರ: ಯಡ್ತಾಡಿ ಗ್ರಾಮದ ಲಾಡ್ಜ್ ವೊಂದರಲ್ಲಿ ಇಸ್ಪೀಟ್ ಜುಗಾರಿ ನಿರತರಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ತಿಕ್ (25), ಕಿರಣ್ (30), ವಿಠ್ಠಲ (30), ಸಂದೇಶ (29), ಶರಣ್(30) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ಕಿರಣ್ ಮೊಗವೀರ ಎಂಬಾತ ಪರಾರಿಯಾಗಿದ್ದಾನೆ. ಈ ವೇಳೆ ಪೊಲೀಸರು ಸ್ಥಳದಲ್ಲಿ ಸಿಕ್ಕಿದ ಹಾಗೂ ವಶಕ್ಕೆ ಪಡೆದವರ ಬಳಿ ಇದ್ದ ಒಟ್ಟು 23,500 ರೂ. ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.