logo
WhatsApp Image 2026-04-02 at 14.46.04.jpeg
hindalco everlast.jpeg

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ಬಿಜೆಪಿ ಸರಕಾರ ವಿರುದ್ಧ ಹೆಣೆದ ರಾಜಕೀಯ ಷಡ್ಯಂತ್ರ: ಶಾಸಕ ವೇದವ್ಯಾಸ ಕಾಮತ್

ಟ್ರೆಂಡಿಂಗ್
share whatsappshare facebookshare telegram
15 Jan 2022
post image

ಮಂಗಳೂರು:

ಮೇಕೆದಾಟು ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಏರ್ಪಡಿಸಿದ ಪಾದಯಾತ್ರೆ ಸಂಪೂರ್ಣ ರಾಜಕೀಯ ಗಿಮಿಕ್ ಆಗಿದ್ದು, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸಿಗರು ಹೆಣೆದ ಷಡ್ಯಂತ್ರದ ಭಾಗ ಇದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಹೋರಾಟ ನಡೆಸಿ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ತಂಡ ನ್ಯಾಯಾಂಗ ವ್ಯವಸ್ಥೆಗೆ ಗೌರವ ಕೊಟ್ಟು ಮುಂದುವರಿಯಬೇಕಿತ್ತು. ಆದರೆ ಇದು ಗೊತ್ತಿದ್ದು ಪಾದಯಾತ್ರೆ ನಡೆಸಿ ನ್ಯಾಯಾಂಗ ವ್ಯವಸ್ಥೆಗೆ ಅಗೌರವ ತೋರಿ ಗೊಂದಲ ಸೃಷ್ಟಿಗೆ ಕಾರಣರಾಗಿದ್ದಾರೆ. ಇದಕ್ಕೆ ನಾಡಿನ ಜನರು ಕಾಂಗ್ರೆಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರು ಹಾಗೂ ಇತರೆಡೆಗೆ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರನ್ನು ಒದಗಿಸಿ ಕೊಡುವುದು ರಾಜ್ಯ ಸರಕಾರದ ಜವಾಬ್ದಾರಿ. ಅದನ್ನು ಮಾಡಿಸಲು ನಮ್ಮ ಸರಕಾರ ಬದ್ಧವಾಗಿದೆ. ಮೇಕೆದಾಟು ವಿಚಾರವಾಗಿ ತಮಿಳುನಾಡು ಸರಕಾರ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಯೋಜನೆ ಜಾರಿಗೆ ತೊಡಕಾಗಿದೆ. ಸಾಧ್ಯವಾದರೆ ಡಿಕೆಶಿ ಮತ್ತವರ ಬಳಗ ತಮಿಳುನಾಡಿಗೆ ಹೋಗಿ ಅಲ್ಲಿನ ಸರಕಾರವನ್ನು ಮನವೊಲಿಸುವ ಕೆಲಸ ಮಾಡಲಿ. ಅದು ಬಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್ಕೋಸ್ಕರ ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಕೋವಿಡ್ 19 ಸೋಂಕು ಮೂರನೇ ಅಲೆ ಉಲ್ಭಣಿಸುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಸೋಂಕು ಹೆಚ್ಚಳಕ್ಕೆ ಕಾಂಗ್ರೆಸಿಗರು ನೇರ ಕಾರಣರಾಗಿದ್ದಾರೆ. ಯಾತ್ರೆ ನಡೆಸದಂತೆ ಎಲ್ಲ ಕಡೆಯಿಂದ ಒತ್ತಡ ಇದ್ದರೂ ಅದನ್ನು ಲೆಕ್ಕಿಸದೆ ಮುಂದುವರಿದಿರುವುದು ಅವರಿಗೆ ಈ ನಾಡಿನ ಜನರ ಆರೋಗ್ಯದ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ಇನ್ನಾದರೂ ಕಾಂಗ್ರೆಸಿಗರು ಮೇಕೆದಾಟು ವಿಚಾರದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸಿ ರಾಜ್ಯ ಸರಕಾರದೊಂದಿಗೆ ಸಹಕರಿಸಲಿ ಎಂದು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.