



ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆಯು ಹಾಲಿ ಶಾಸಕರಾದ ಸನ್ಮಾನ್ಯ ಶ್ರೀ ಕೆ ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ನಮ್ಮ ನೆಚ್ಚಿನ ಅಭ್ಯರ್ಥಿ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್,ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಚುನಾವಣಾ ಕ್ಷೇತ್ರ ಪ್ರಭಾರಿಗಳಾದ ಗಣೇಶ್ ಹೊಸಬೆಟ್ಟು, ಚುನಾವಣಾ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್ ಮತ್ತು ದಿನೇಶ್ ಅಮೀನ್, ಗ್ರಾಮಾಂತರ ಬಿ.ಜೆ.ಪಿ ಪ್ರಧಾನ ಕಾರ್ಯದಶಿಗಳಾದ ಸಚಿನ್ ಪೂಜಾರಿ ಮತ್ತು ಗಣೇಶ್ ಕುಲಾಲ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.