logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮೀನುಗಾರಿಕೆ ಬಂದರುಗಳಲ್ಲಿ ಶುಚಿತ್ವ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಟ್ರೆಂಡಿಂಗ್
share whatsappshare facebookshare telegram
2 Dec 2023
post image

ಉಡುಪಿ: ಜಿಲ್ಲೆಯ ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರುಗಳಲ್ಲಿ ಶುಚಿತ್ವಕ್ಕೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವುದರೊಂದಿಗೆ, ಯಾವುದೇ ಅವಘಡಗಳು ನಡೆಯದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಬಂದರುಗಳಲ್ಲಿ ಶುಚಿತ್ವ ಹಾಗೂ ಸುರಕ್ಷತೆ ಕ್ರಮಗಳನ್ನು ಪಾಲಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮೀನುಗಾರಿಕಾ ಜಟ್ಟಿಗಳ ನಿರ್ವಹಣೆಗೆ ಈಗಾಗಲೇ ಗುತ್ತಿಗೆಯನ್ನು 2019 ರಿಂದ 2020 ರ ವರೆಗೆ ನೀಡಲಾಗಿದ್ದು, ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವುದರೊಂದಿಗೆ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಹಾಗೂ ಅಗ್ನಿ ಅವಘಡಗಳು ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು.

ಮೀನುಗಾರಿಕಾ ಚಟುವಟಿಕೆಗಳಿಗೆ ಪೂರಕವಾಗಿ ಬರುವಂತಹ ವಾಹನಗಳಿಂದ ಮಾತ್ರ ಪಾರ್ಕಿಂಗ್ ಶುಲ್ಕವನ್ನು ಪಡೆಯಬೇಕು. ಇತರೆ ಸಾರ್ವಜನಿಕ ಸಂಚಾರಿ ವಾಹನಗಳಿಂದ ಯಾವುದೇ ರೀತಿಯ ಶುಲ್ಕವನ್ನು ಪಡೆಯಬಾರದೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಇತ್ತೀಚೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಆಕಸ್ಮಿಕವಾಗಿ ಅಗ್ನಿ ದುರಂತದಿ೦ದ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇಂತಹ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಗ್ನಿ ನಂದಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳು ಬಂದರಿನಲ್ಲಿ ವ್ಯವಸ್ಥೆ ಹೊಂದಿರುವ೦ತೆ ನೋಡಿಕೊಳ್ಳಬೇಕು ಎಂದರು.

ಮರದ ಬೋಟುಗಳನ್ನು ನಿರ್ಮಾಣ ಮಾಡಲು ಅನುಮತಿಯನ್ನು ನೀಡಲಾಗಿದೆ. ಆದರೆ, ಕೆಲವರು ರಾಸಾಯನಿಕಗಳ ಬಳಕೆಯೊಂದಿಗೆ ಯಾಂತ್ರೀಕೃತ ದೋಣಿಗಳು ನಿರ್ಮಾಣ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕೆಂದು ಸೂಚನೆ ನೀಡಿದರು.

ಗಂಗೊಳ್ಳಿ ಬಂದರಿನಲ್ಲಿ ಅಗ್ನಿ ಶಾಮಕ ಉಪಠಾಣೆ ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚಿಸಿದ ಅವರು, ಅಗ್ನಿ ನಂದಿಸಲು ಅಗತ್ಯವಿರುವ ಆಧುನಿಕ ವಾಹನದ ಖರೀದಿಗೆ ಕ್ರಿಯಾಯೋಜನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಪ್ರಕೃತಿ ವಿಕೋಪದಿಂದ ಅನಾಹುತಗಳು ಸಂಭವಿಸುವುದು ಅನಿರೀಕ್ಷಿತ. ಆದರೆ ಮಾನವ ನಿರ್ಮಿತ ತಪ್ಪಿನಿಂದಾಗಿ ಅವಘಡಗಳು ಸಂಭವಿಸಿದರೆ ಸಂಬ೦ಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ಮೇಲೆ, ಪ್ರಾಕೃತಿಕ ವಿಕೋಪ ನಿರ್ವಹಣಾ ಕಾಯ್ದೆಯನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಬ೦ದರು ಇಲಾಖೆಯ ಅಧಿಕಾರಿಗಳು ಬಂದರಿನ ನಿರ್ವಹಣೆಯ ಕುರಿತು ಅಗತ್ಯವಿರುವ ಕ್ರಿಯಾ ಯೋಜನೆಯನ್ನು ತಯಾರಿಸುವುದರೊಂದಿಗೆ ನಿಗಧಿತ ಕಾಲಾವಧಿಯೊಳಗೆ ಸುರಕ್ಷತೆ ಸೇರಿದಂತೆ ಮತ್ತಿತರ ಕಾರ್ಯಚಟುವಟಿಕೆಗಳ ಬಗ್ಗೆ ಕ್ರಮ ವಹಿಸಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಬಂದರು ಇಲಾಖೆಯ ಅಭಿಯಂತರರುಗಳು ಹಾಗೂ ಮತ್ತಿತರ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.