



ಬೆಳ್ಮಣ್ : ಕಾಲೇಜು ಬಸ್ಸು ಹಾಗೂ ಎಕ್ಸ್ಪ್ರೆಸ್ ಖಾಸಗಿ ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೆದಿಂಜೆಯಲ್ಲಿ ನಡೆದಿದೆ. ನಿಟ್ಟೆ ಭಾಗದಿಂದ ಮಂಗಳೂರು ಕಡೆಯತ್ತ ಸಾಗುತ್ತಿದ್ದ ಕಾಲೇಜಿನ ಬಸ್ಸಿನ ಚಾಲಕ ಹಿಂದೆ ಬರುತ್ತಿದ್ದ ವಾಹನವನ್ನು ಗಮನಿಸದೆ ಏಕಾಏಕಿ ಬಲಕ್ಕೆ ತಿರುಗಿಸಿದ ಪರಿಣಾಮ ಹಿಂದೆಯಿಂದ ಬಂದ ಬಸ್ಸು ನಿಯಂತ್ರಣ ಕಳೆದುಕೊಂಡು ಕಾಲೇಜು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳು ಜಖಂಗೊಂಡಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಸವರನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.