



ಕಾರ್ಕಳ: ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಬಳಿಯ ಕುಪ್ಪೇಬೆಟ್ಟು ಎಂಬಲ್ಲಿ ಸುಮಾರು ನೀಲಮ್ಮ(೮೫) ಎಂಬವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದರು. ಮಾರ್ಚ್ ೦೧ರಂದು ಬೆಳಿಗ್ಗೆ ೧೦.೧೫ ಗಂಟೆಗೆ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬಾವಿಗೆ ಬಿದ್ದಿದ್ದ ವೃದ್ಧೆಯನ್ನು ಬಾವಿಯಿಂದ ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಂ ಸಂಜೀವ್,ಸಿಬ್ಬAದಿಗಳಾದ ಚಂದ್ರಶೇಖರ್, ರೂಪೇಶ್,ನಿತ್ಯಾನಂದ, ಶಿವಯ್ಯ, ಅನಿಲ್ ಥಾಮಸ್, ಚಿತ್ರೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.