



ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಮುಂದುವರೆದಿದ್ದು , ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 72 ಗಂಟೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ.7ರವರೆಗೆ ಭಾರೀ ಮಳೆಯಾಗಲಿದೆ. ಬೀದರ್, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗೋ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ಹಿನ್ನೆಲೆಯಲ್ಲಿ ಜುಲೈ5 ರಂದು ಉಡುಪಿ ದ.ಕ ಜಿಲ್ಲೆಗಳಲ್ಲಿ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.