logo
WhatsApp Image 2026-04-02 at 14.46.04.jpeg
hindalco everlast.jpeg

ರಸ್ತೆ ಅಪಘಾತ: ಉಡುಪಿ ನಗರಸಭೆಯ ವ್ಯವಸ್ಥಾಪಕ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
22 Nov 2021
post image

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣ ಎಂಬವರು ಚಿಕಿತ್ಸೆ ಫಲಕಾರಿಯಾಗದೆ‌ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಎಡವಿ ರಸ್ತೆಗೆಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ವೆಂಕಟರಮಣ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.