



ಕಾರ್ಕಳ: ಪ್ರತಿಷ್ಠಿತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27ನೇ ಸಾಲಿನ ಒಂಬತ್ತನೇ ವರ್ಷದ ಅಧ್ಯಕ್ಷರಾಗಿ ಸಿವಿಲ್ ಎಂಜಿನಿಯರ್ ಶ್ರೀ ಮಂಜುನಾಥ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಿವೃತ್ತ ಪ್ರಾಂಶುಪಾಲರಾದ ಶ್ರೀ ಗಣೇಶ್ ಬಾರ್ಲಾಯ ಅವರು ಆಯ್ಕೆಯಾಗಿದ್ದಾರೆ.
ದಿನಾಂಕ 06-03-2026 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಸ್ಥೆಯ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ. ಭರತೇಶ್ ಆದಿರಾಜ್, ಹಾಲಿ ಅಧ್ಯಕ್ಷರಾದ ಶ್ರೀ ಸುರೇಂದ್ರ ನಾಯಕ್, ಪೂರ್ವಾಧ್ಯಕ್ಷರಾದ ಶ್ರೀ ಪ್ರಶಾಂತ್ ಬಿಳಿರಾಯ, ಶ್ರೀ ಪ್ರಕಾಶ್ ಪೈ, ಶ್ರೀ ಉಪೇಂದ್ರ ವಾಗ್ಲೆ ಹಾಗೂ ಇತರರು ಸಭೆಯಲ್ಲಿ ಹಾಜರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.