logo
WhatsApp Image 2026-04-02 at 14.46.04.jpeg
hindalco everlast.jpeg

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸೇಕ್ರೆಡ್ ಹಾರ್ಟ್ ಚರ್ಚ್ ಎರ್ಮಾಳ್ ಇದರ ವತಿಯಿಂದ ಹೊರೆಕಾಣಿಕೆ ಸಮರ್ಪಣೆ:

ಟ್ರೆಂಡಿಂಗ್
share whatsappshare facebookshare telegram
1 Apr 2022
post image

ಉಚ್ಚಿಲ: ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ರಥೋತ್ಸವ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮದ ಅನ್ನಸಂತರ್ಪಣೆಗೆ ಎರ್ಮಾಳು ಸೇಕ್ರೆಡ್ ಹಾರ್ಟ್ ಚರ್ಚ್ ವತಿಯಿಂದ ಹೊರೆಕಾಣಿಕೆಯು ಸಮರ್ಪಣೆಗೊಂಡಿತು. ಈ ಸಂದರ್ಭದಲ್ಲಿ ಜೇಮ್ಸ್ ಡಿಸೋಜ, ವೆಲೇರಿಯನ್ ಡಿಸೋಜ, ಹಿಲರಿ ಡಿಸೋಜ, ವೆರೊನಿಕ ಬರ್ಬೋಜ, ಶಾರ್ಲೆಟ್ ಫುರ್ಟಾಡೋ, ವನಿತಾ ಡಿಸೋಜ, ಗ್ರೆಟ್ಟಾ ಡಿಸೋಜ, ಲೀನ ಡಿಸೋಜ, ರೀನಾ ಡಿಸೋಜ, ಅಲೈಸ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ|| ಜಿ ಶಂಕರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಶ್ರೀ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ವಿನಯ ಕರ್ಕೆರ ಉಪಸ್ಥಿತರಿದ್ದು ಗೌರವಪೂರ್ವಕವಾಗಿ ಸ್ವಾಗತಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.