



ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2023ಕ್ಕೆ* ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ.
ಶಿರಸಿಯ ಸುಬ್ರಾಯ ಮತ್ತಿಹಳ್ಳಿ ( ವಿಮರ್ಶನ ಸಾಹಿತ್ಯ), ಉಡುಪಿಯ ಅಂಶುಮಾಲಿ (ಬಹುಭಾಷಾ ಸಾಹಿತ್ಯ), ಕೋಟಾದ ನೀಲಾವರ ಸುರೇಂದ್ರ ಅಡಿಗ (ಸಮಗ್ರ ಸಾಹಿತ್ಯ ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ ಒಂದರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ 'ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2003' ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿಯಾದ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.