logo
WhatsApp Image 2026-04-02 at 14.46.04.jpeg
hindalco everlast.jpeg

ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು ದಾಸ ಭಂಡಾರಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
23 Nov 2022
post image

ಉಡುಪಿ:

ಜಿಲ್ಲೆಯ ಸಿಪಿಐಎಂ ಪಕ್ಷದ ಹಿರಿಯ ಮುಖಂಡರಾದ ಯು‌. ದಾಸ ಭಂಡಾರಿ ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳನ್ನು‌ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭೂಸುಧಾರಣೆಯ ಹೋರಾಟದ ಸಮಯದಲ್ಲಿ ದೈಹಿಕ ಹಲ್ಲೆಗೆ ಒಳಗಾಗಿದ್ದರೂ ಹೋರಾಟದಿಂದ‌ ಹಿಂದೆ ಸರಿದಿರಲಿಲ್ಲ. ವಿವಿಧ ಕಾರ್ಮಿಕ‌ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮಿಸಿದ್ದ ಅವರು, ಸರ್ಕಾರದ ಸೌಲಭ್ಯಗಳನ್ನು‌ ಕಾರ್ಮಿಕರಿಗೆ ಕೊಡಿಸುವಲ್ಲಿ ಅವಿರತ ಹೋರಾಟವನ್ನು‌ ನಡೆಸಿದ್ದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿಯೂ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅನಾರೋಗ್ಯದ ಕಾರಣದಿಂದ ಕಳೆದ ಕೆಲ‌ ದಿನಗಳಿಂದ‌ ಮನೆಯಲ್ಲೇ ವಿಶ್ರಾಂತಿ‌ ಪಡೆಯುತ್ತಿದ್ದರು. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.