



ನವದೆಹಲಿ: ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಕೊನೆಯುಸಿರೆಳೆದಿರುವ ದಾರುಣ ಘಟನೆ ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿರುವುದಾಗಿ ವರದಿ ತಿಳಿಸಿದೆ. ಮೇಲ್ನೋಟಕ್ಕೆ ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ಇಹಲೋಕ ತ್ಯಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದೆ. ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದಿದ್ದು, ಇದರಲ್ಲಿ ಮಕ್ಕಳು ಸೇರಿದಂತೆ ಆರು ಜನರು ವಿಧಿವಶರಾಗಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.