



ಬೆಂಗಳೂರು: ತಂದೆಯ ಸಾಲಕ್ಕೆ ಭದ್ರತೆಯಾಗಿ ಚೆಕ್ ನೀಡಿದ ಮಗ ತೀರಿಸಲು ಅರ್ಹ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ಬಡ್ಡಿ ಸಹಿತ 4.5 ಲಕ್ಷ ರೂಪಾಯಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ಸಾಲ ಪಡೆದವರು ಮೃತಪಟ್ಟಿದ್ದರಿಂದ ತಾನು ಬಾಧ್ಯಸ್ಥನಲ್ಲವೆಂದು ಮಗ ವಾದ ಮಂಡಿಸಿದ್ದರು. ಪುತ್ರನ ವಾದವನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಹೈಕೋರ್ಟ್ ಪೀಠ ತಂದೆಯ ಸಾಲಕ್ಕೆ ಪ್ರತಿಯಾಗಿ ಚೆಕ್ ನೀಡಿರುವುದರಿಂದ ಮಗ ಬಾಧ್ಯಸ್ಥ ಎಂದು ತೀರ್ಪು ನೀಡಿದೆ. ಖಾತರಿದಾರ ಸಾಲಕ್ಕೆ ಹೇಗೆ ಅರ್ಹನೋ ಅದೇ ರೀತಿ ಚೆಕ್ ನೀಡಿದ ಪುತ್ರನೂ ಸಾಲತೀರಿಸಲು ಅರ್ಹ ಎಂದು ಈ ಕುರಿತಾಗಿ ಜೆಎಂಎಫ್ಸಿ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.