



ಮಂಗಳೂರು;
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಆಸ್ಕರ್ ಅವರ ಪತ್ನಿ ಬ್ಲಾಸಂ ಅವರಿಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಬ್ಲಾಸಂ ಅವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಮಾತು ನುಡಿದಿದ್ದಾರೆ. ಈ ವೇಳೆ ಪತಿ ಅಗಲುವಿಕೆಯ ನೋವಿನಿಂದ ಬ್ಲಾಸಂ ಅವರು
ಕಣ್ಣೀರಿಟ್ಟಿದ್ದಾರೆ. ಇಂದಿರಾ ಗಾಂಧಿ ಕಾಲದಿಂದಲೂ ಆಸ್ಕರ್ ಅವರು ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದರು. ರಾಜೀವ್ ಗಾಂಧಿ,
ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಆಪ್ತರಾಗಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.