logo
WhatsApp Image 2026-04-02 at 14.46.04.jpeg
hindalco everlast.jpeg

ಮನೆ ನಿರ್ಮಾಣಕ್ಕೆ ಸಹಾಯಧನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
4 Jul 2025
post image

ಉಡುಪಿ: ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡAತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು.

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಯುನಿಫೈಡ್ ವೆಬ್ ಪೋರ್ಟಲ್ ನಲ್ಲಿ ಫಲಾನುಭವಿಗಳು ಸ್ವ-ಇಚ್ಛೆಯಿಂದ ಅಥವಾ ವೆಬ್‌ಸೈಟ್ https://pmay-urban.gov.in ನಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ಆಧಾರ್ ಕಾರ್ಡ್ ಪ್ರತಿ, ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬAದಿಸಿದ ದಾಖಲೆಗಳು, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಸೆಲ್ಫ್ ಡಿಕ್ಲರೇಷನ್ ಫಾರ್ಮ್ ಸಲ್ಲಿಸುವುದು, ಮೊಬೈಲ್ ಸಂಖ್ಯೆ ಹಾಗೂ ಲಭ್ಯವಿದ್ದಲ್ಲಿ ಪ್ಯಾನ್ ಕಾರ್ಡ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ಪುರಸಭಾ ಕಚೇರಿಯ ವಸತಿ ಶಾಖೆಯನ್ನು ಕಛೇರಿ ವೇಳೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ಒಳಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.