



ಉಡುಪಿ: ಜಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುಕುಮಾರ್ ಮುನಿಯಾಲ್ ರವರು ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀದತ್ತ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಸುಮಲತಾ ಹೆಬ್ಬಾರ್, ಕೋಶಾಧಿಕಾರಿಯಾಗಿ ಪ್ರಮೋದ್ ಚಂದ್ರ ಪೈ ಅವಿರೋಧ ಆಯ್ಕೆಯಾಗಿದ್ದಾರೆ.
ಉಡುಪಿ ಜಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಸೂಚನೆ ಮೇರೆಗೆ ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್ ಕಾರ್ಕಳ ರವರ ಮೇಲುಸ್ತುವಾರಿಯಲ್ಲಿ ಹೆಬ್ರಿಯ ಚೈತನ್ಯ ಸಭಾಗ್ರಹದಲ್ಲಿ ಬುಧವಾರ ನಡೆದ ಸಭೆಯ ಈ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನರೇಂದ್ರ ಎಸ್, ಸಂತೋಷ್ ಶೆಟ್ಟಿ, ಸಂಜೀವ ಆರ್.ಡಿ, ರಂಜೀತ್ ಶಿರ್ಲಾಲ್ ಆಯ್ಕೆ ಮಾಡಲಾಯಿತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.