



ಸುಳ್ಯ : ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿ ಯುವಕ ನಾಪತ್ತೆಯಾದ ಘಟನೆ ಸುಳ್ಯದ ಬೀರಮಂಗಲದ ಎಂಬಲ್ಲಿ ನಡೆದಿದೆ.ಪ.ಬಂಗಾಳ ಮೂಲದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿದ್ದಾನೆ , ಹೋಟೆಲ್ನಲ್ಲಿ ಕೆಲಸ ಮಾಡುತಿದ್ದ ಇಮ್ರಾನ್ ಕಳೆದ ಎರಡು ದಿನಗಳ ಹಿಂದೆ ಊರಿಗೆ ಹೋಗುವುದಾಗಿ ಹೊಟೇಲ್ ಮಾಲಕನ ಬಳಿ ತಿಳಿಸಿದ್ದಾನೆ ಎನ್ನಲಾಗಿದ್ದು ,ಆತ ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ. ಆತ ಊರಿಗೆ ಹೋಗುವ ಸಂದರ್ಭದಲ್ಲಿ ಮನೆಯಲ್ಲಿ ಕಿರುಚುವ ಶಬ್ದ ಕೇಳಿದೆ " ಈ ವಿಷಯವನ್ನು ಹೊಟೇಲ್ ಮಾಲಕರು ಪೋಲೀಸರಿಗೆ ತಿಳಿಸಿದ್ದಾರೆ. ಆದರೆ ಮಂಗಳವಾರ ಸಂಜೆ ಬಾಡಿಗೆ ಮನೆಗೆ ಹೋಗಿ ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.