



ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿಗೆ ಸೇರಲಿರುವ ಸುಮಲತಾ ಅವರು ತನ್ನ ಪುತ್ರ ಅಭಿಷೇಕ್ ಅವರನ್ನು ಮಂಡ್ಯದ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಗನ ಭವಿಷ್ಯದ ದೃಷ್ಟಿಯಿಂದ ಸುಮಲತಾ ತನ್ನ ಬೆಂಬಲಿಗರ ಜತೆ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಂಗಳವಾರ ಅವರು
ಮದುವೆ ಸಮಾರಂಭವೊಂದರಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ಮುಂದಿನ ತಿಂಗಳಲ್ಲಿ ಬಹುತೇಕ ಸುಮಲತಾ ಬಿಜೆಪಿ ಸೇರಬಹುದು ಎಂದು ಚರ್ಚೆ ಆರಂಭವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.