logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸುನಿಲ್‌ರವರ ದೂರದೃಷ್ಟಿಯ ಯೋಜನೆಗಳಿಂದ ಸ್ವರ್ಣ ಕಾರ್ಕಳದ ಕಲ್ಪನೆ ಸಾಕಾರಗೊಳ್ಳುತ್ತಿದೆ - ಮಣಿರಾಜ್ ಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
1 May 2023
post image

ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್‌ ಕುಮಾರ್ ಪೂರಕ ಆಡಳಿತ ನೀಡಿದ್ದರು. ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದ ಜನರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು ಅಪಪ್ರಚಾರದಲ್ಲಿ ತೊಡಗಿ ಮತಯಾಚಿಸುತ್ತಿದ್ದಾರೆ.

ಕ್ಷೇತ್ರದ ಜನ ಕ್ಷೇತ್ರದಲ್ಲಿ ಆದ ವಾಸ್ತವ ಬದಲಾವಣೆಗಳನ್ನು ಅರಿತು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ ಕುಮಾರ್‌ ಅವರನ್ನು ಈ ಬಾರಿ ಬೆಂಬಲಿಸುವಂತೆ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ್ ಶೆಟ್ಟಿ ಕರೆ ನೀಡಿದರು. ಕೈರಬೆಟ್ಟುವಿನಲ್ಲಿ ಮತ ಯಾಚನೆ ನಡೆಸಿದ ಅವರು ಕ್ಷೇತ್ರದ ಜನರ ಆಶೋತ್ತರಗಳಿಗೆ ಸುನಿಲ್ ಸ್ಪಂದಿಸಿದ್ದಾರೆ, ಕಾರ್ಕಳದ ಹೆಸರು ವಿಶ್ವಕ್ಕೆ ವಿಸ್ತರಿಸಿlದೆ. ಅವರ ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದ ಜನರಷ್ಟೆ ಅಲ್ಲ ಇಡೀ ನಾಡು ಕೊಂಡಾಡುತ್ತಿದೆ. ಆದರೆ ಇಲ್ಲಿನ ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ಜಾತಿ ಆಧಾರದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದೆ. ಸುನಿಲ್‌ರವರ ದೂರದೃಷ್ಟಿಯ ಯೋಜನೆಗಳಿಂದ ಸ್ವರ್ಣ ಕಾರ್ಕಳದ ಕಲ್ಪನೆ ಸಾಕಾರಗೊಳ್ಳುತ್ತಿದೆ. ಅಂತಹ ಹೊಸತನ ಸೃಷ್ಟಿಸುವ ಸರ್ವ ಸಮುದಾಯದ ಅಭಿವೃದ್ಧಿಗೆ ಚಿಂತಿಸುವ ಅಭ್ಯರ್ಥಿಗೆ ಎಲ್ಲರ ಬೆಂಬಲ ಅಗತ್ಯ. ಕ್ಷೇತ್ರದಲ್ಲಿ ಈ ವರೆಗೂ ಕಾಣದ ಕಾಂಗ್ರೆಸ್ ಈಗ ಜಾತಿ, ಅಪಪ್ರಚಾರ ಹೆಸರಿನಲ್ಲಿ ಮನೆಬಾಗಿಲು ಬಡಿಯುತ್ತಿದೆ.‌ ಅವರ ಗ್ಯಾರಂಟಿ ಕಾರ್ಡ್ ಬಿಡಿ ಅವರಿಗೆ ಗ್ಯಾರಂಟಿ ಇಲ್ಲ ಎಂದು ದೂರಿದರು. ಅಭ್ಯರ್ಥಿ ವಿ ಸುನಿಲ್‌ಕುಮಾರ್, ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.