



ಕಾರ್ಕಳ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಹೆಬ್ರಿಯ ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷ , ಹೆಬ್ರಿ ವ್ಯವಸಾಯ ಸೆವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದ ಸುರೇಶ್ ಭಂಡಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ವಿಕಾಸ ಕಚೇರಿಯಲ್ಲಿ ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು .
ಹೆಬ್ರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಹಿನ್ನೆಡೆ : 1999 ರಲ್ಲಿ ಅಂದಿನ ಕಾಂಗ್ರೇಸ್ ಪಕ್ಷದಿಂದ ಕಾರ್ಕಳ ವಿಧಾನಸಭೆಯ ಪ್ರವೇಶಿಸಿದ್ದ ಗೋಪಾಲ ಭಂಡಾರಿಯವರ ಜೊತೆ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಸುರೇಶ್ ಭಂಡಾರಿ ಪಂಚಾಯತ್ ಚುನಾವಣೆಯಲ್ಲಿ ತಮ್ಮ ಇಂದಿರಾ ನಗರ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದರು .
ಈಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ನ್ಯಾಯಕತ್ವವಿಲ್ಲದೆ ಸೊರಗಿ ಹೋಗುತಿದ್ದು ನೆಲೆಇಲ್ಲದಂತಾಗಿದೆ ಎಂದು ಪಕ್ಷದ ಸುರೇಶ್ ಭಂಡಾರಿ ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.