logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

“ಕುಟುಂಬವು ಸಕಲ ಮೌಲ್ಯಗಳ ಆಗರ”: ಬಿಷಪ್ ಆಲೋಶಿಯಸ್ ಪಾವ್ಲ್ ಡಿಸೋಜಾ

ಟ್ರೆಂಡಿಂಗ್
share whatsappshare facebookshare telegram
23 Feb 2022
post image

ಕಾರ್ಕಳ : “ಕುಟುಂಬದಲ್ಲಿ ಆರಂಭಗೊAಡ ಮಾನವ ಜೀವ ಮತ್ತು ಜೀವನವು ಕುಟುಂಬದಲ್ಲಿಯೇ ಕೊನೆಗೊಳ್ಳುವುದರಿಂದ ಮಾನವನ ಅಸ್ತಿತ್ವ ಹಾಗೂ ಸಾಧನೆಗಳ ಆಗರ ಕುಟುಂಬವೇ ಆಗಿದೆ. ಆಧುನಿಕ ಕಾಲದಲ್ಲಿ ಕುಟುಂಬದ ಮೌಲ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿರುವುದರಿಂದ ಪ್ರತಿಯೊಬ್ಬರೂ ಕುಟುಂಬದ ಉಳಿಯುವಿಕೆಗೆ ಪ್ರಯತ್ನಪಡುವುದು ಅನಿವಾರ್ಯ” ಎಂದು ಅಭಿಪ್ರಾಯಪಟ್ಟರು ಮಂಗಳೂರು ಧರ್ಮಪ್ರಾಂತದ ನಿವೃತ್ತ ಧರ್ಮಾಧ್ಯಕ್ಷ ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾರವರು. ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಮಹೋತ್ಸವದ ನಾಲ್ಕನೇ ದಿನ ಬುಧವಾರದಂದು ಪ್ರಮುಖ ಬಲಿಪೂಜೆಯನ್ನು ಅರ್ಪಿಸಿ ಪ್ರಬೋಧನೆಯನ್ನು ನೀಡುತ್ತಿದ್ದರು. ಫೆಬ್ರವರಿ ೨೦ ರಂದು ಆರಂಭಗೊAಡ ವಾರ್ಷಿಕ ಮಹೋತ್ಸವವು ನಾಲ್ಕನೇ ದಿನದಂದು ಕುಟುಂಬಗಳ ಏಳಿಗೆಗಾಗಿ ವಿಶೇಷವಾಗಿ ಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಯಿತು. ದಿನದ ಪ್ರಮುಖ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾರವರು ನೆರವೇರಿಸಿದರು. ದಿನದ ಇತರ ಬಲಿಪೂಜೆಗಳನ್ನು ವಂದನೀಯ ಜೊನ್ ಬಾರ್ಬೊಜಾ, ಪಿಲಾರು; ವಂದನೀಯ ಜೊಯ್ ಜೊಲ್ಸನ್ ಅಂದ್ರಾದೆ, ಶಿವಮೊಗ್ಗ; ವಂದನೀಯ ಮ್ಯಾಕ್ಸಿಮ್ ಡಿ’ಸೋಜಾ, ಮಂಗಳೂರು ಇವರು ನೆರವೇರಿಸಿದರು. ದಿನದ ಅಂತಿಮ ಬಲಿಪೂಜೆಯನ್ನು ವಂದನೀಯ ರೊಯ್ಸನ್ ಡಿ’ಸೋಜಾ, ಸಂಪಾದಕರು ‘ಉಜ್ವಾಡ್’ ಇವರು ನೆರವೇರಿಸುವುದರೊಂದಿಗೆ ಮಹೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮಗಳಿಗೆ ತೆರೆ ಬಿದ್ದಿತು. ಮಹೋತ್ಸವದ ಐದನೇ ಮತ್ತು ಅಂತಿಮ ದಿನ ಗುರುವಾರ ಬೆಳಿಗ್ಗೆ ೮, ೧೦, ೧೨ ಹಾಗೂ ಮಧ್ಯಾಹ್ನ ೨, ೪ ಮತ್ತು ೭ ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಸಂಜೆ ೪ ಗಂಟೆಯ ವಿಶೇಷ ಸಾಂಭ್ರಮಿಕ ಬಲಿಪೂಜೆಯನ್ನು ಬೆಳ್ತಂಗಡಿಯ ಧರ್ಮಾಧ್ಯಕ್ಷ ಪರಮಪೂಜ್ಯ ಡಾ| ಲಾರೆನ್ಸ್ ಮುಕ್ಕುಝಿಯವರು ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ. ಮಹೋತ್ಸವದ ಅಂತಿಮ ಪೂಜೆ ಸಂಜೆ ೭ ಗಂಟೆಗೆ ಮಾಜಿ ಶಾಸಕರು ಹಾಗೂ ಮಂತ್ರಿಗಳಾದ ಶ್ರೀ ರಮಾನಾಥ ರೈ, ಪ್ರಮೋದ್ ಮಧ್ವರಾಜ್, ಅಭಯ ಚಂದ್ರ ಜೈನ್ ಪುಣ್ಯಕ್ಷೇತ್ರಕ್ಕೆ ಭೇಟಿಯಿತ್ತು ಪ್ರಾರ್ಥಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.