



ಬೆಂಗಳೂರು ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು.ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ.
ಇನ್ನು 10 ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರುವರಿಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ....
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.