ಕೇರಳ: ಕೇರಳದ ಪಾಲಕ್ಕಾಡ್ ನ ವಾಳಯಾರ್ ನಲ್ಲಿ ಓಣಂ ಅಂಗವಾಗಿ ನಡೆದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಉಸಿರುಕಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಥಳೀಯ ಕ್ಲಬ್ ಈ ಸ್ಪರ್ಧೆಯನ್ನು ಆಯೋಜಿಸಿತ್ತು. ಮೃತ ಸುರೇಶ್ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಇಡ್ಲಿ ತಿನ್ನುವ ವೇಳೆ ಉಸಿರುಗಟ್ಟಿತು ಮತ್ತು ಅಲ್ಲಿದ್ದವರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಮತ್ತು ಗಂಟಲಲ್ಲಿ ಸಿಲುಕಿದ್ದ ಇಡ್ಲಿಯನ್ನು ಹೊರತೆಗೆದರು ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳೀಯ ಆಸ್ಪತ್ರೆಗೆ ದಾಖಲಿಸುವುದಕ್ಕೂ ಮುನ್ನ ಆತ ಸಾವನ್ನಪ್ಪಿದ್ದರು. ವಾಳಯಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಅಸ್ವಾಭಾವಿಕ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.