



ನವದೆಹಲಿ: ಆಂಜನೇಯನ ಜನ್ಮಸ್ಥಳ ಎಂದು ಪರಿಗಣಿಸಲಾಗುವ ನಾಸಿಕ್ನ ಅಂಜನೇರಿ ಬೆಟ್ಟಕ್ಕೆ ರೋಪ್ವೇ ನಿರ್ಮಿಸುವ ಯೋಜನಾ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.
377 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಗಿರಿ ಟ್ರೆಕ್ಕಿಂಗ್ ಪಾಯಿಂಟ್ನಿಂದ ಅಂಜನೇರಿ ಬೆಟ್ಟಗಳಿಗೆ ಮುಂದಿನ ಎರಡು ವರ್ಷದ ಅವಧಿಯಲ್ಲಿ ರೋಪ್ವೇ ನಿರ್ಮಿಸಲು ತಿರ್ಮಾನಿಸಿದೆ.
ಕೇಂದ್ರ ಸರ್ಕಾರದ ಪ್ರಮುಖ ‘ಪರ್ವತ್ಮಾಲಾ’ ಯೋಜನೆಯಡಿಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶುಕ್ರವಾರ ಯೋಜನೆಗಾಗಿ ಬಿಡ್ಗಳನ್ನು ಆಹ್ವಾನಿಸಿದೆ. ಅಂಜನೇರಿ ಬೆಟ್ಟಗಳು ಹನುಮಂತನ ಜನ್ಮಸ್ಥಳ ಎಂದು ಹೇಳಲಾಗುತ್ತದೆ. ಇದು ಯಾತ್ರಿಕರು ಮತ್ತು ಚಾರಣಿಗರು ಭೇಟಿ ನೀಡುವ ಗುಹೆ ಮತ್ತು ಅಂಜನಿ ಮಾತಾ ದೇವಾಲಯವನ್ನು ಹೊಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.