logo
WhatsApp Image 2026-04-02 at 14.46.04.jpeg
hindalco everlast.jpeg

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಪ್ಪರ್

ಟ್ರೆಂಡಿಂಗ್
share whatsappshare facebookshare telegram
11 Nov 2023
post image

ಮೂಡುಬಿದಿರೆ : ನಿಡೋಡಿಯಿಂದ ಕಟೀಲು ಕಡೆಗೆ ಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮವಾಗಿ ಟಿಪ್ಪರ್ ಚಾಲಕ, ಮೂಡುಬಿದಿರೆ ತಾಲೂಕು ಪಾಲಡ್ಕದ ನಿವಾಸಿ ವಿಶ್ವನಾಥ ನಾಯಕ್ ಮೃತಪಟ್ಟಿದ್ದಾರೆ. ಶುಂಠಿಲ ಪದವು ಕಡೆಯಿಂದ ಕೆಂಪುಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ದೊಡ್ಡ ಹೊಂಡಕ್ಕೆ ಟಿಪ್ಪರ್ ಬಿದ್ದಿದೆ ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಡಕುಟುAಬದವರಾಗಿರುವ ವಿಶ್ವನಾಥ ನಾಯಕ್ ಅವರ ಕುಟುಂಬದ ಜೀವನವು ಅವರ ದುಡಿಮೆಯಿಂದಲೇ ನಡೆಯುತ್ತಿತ್ತು. ಪತ್ನಿ ಮತ್ತು ಪುಟ್ಟ ಪುಟ್ಟ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಮುಂದಿನ ಜೀವನಕ್ಕೆ ಕಷ್ಟ ಸಾಧ್ಯವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.