logo
WhatsApp Image 2026-04-02 at 14.46.04.jpeg
hindalco everlast.jpeg

ದೇವಸ್ಥಾನಗಳಲ್ಲಿ ಕಳ್ಳತನ: ಕಂಬದ ಕೋಣೆಯಲ್ಲಿ ಆರೋಪಿ ಸೆರೆ

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಬೈಂದೂರು:

ತೆಗ್ಗರ್ಸೆ ಗ್ರಾಮದ ಹಾಗೂ ಹೊಸೂರಿನ ದೇವ ಸ್ಥಾನಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಂಬದ ಕೋಣೆಯ ನಿವಾಸಿ 23 ವರ್ಷದ ಕರುಣಾಕರ ದೇವಾಡಿಗ ಎಂದು ಗುರುತುಸಿಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ತಗರ್ಸೆ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನ ಹಾಗೂ ಹೊಸೂರು ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತಗರ್ಸೆ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ 32 ಸಾವಿರ ರೂ. ಮೌಲ್ಯದ ದೇವರ ಆಭರಣ ಹಾಗೂ 10ಸಾವಿರ ನಗದು ಕಳ್ಳತನವಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.