logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ(ಜು.2) ಭಾರೀ ಮಳೆಯ ಹಿನ್ನೆಲೆ, ದ.ಕ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಟ್ರೆಂಡಿಂಗ್
share whatsappshare facebookshare telegram
1 Jul 2026
post image

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಿಸಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಪೋಷಕರು ಹಾಗೂ ಸಾರ್ವಜನಿಕರು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ, ತಗ್ಗು ಪ್ರದೇಶಗಳು, ನದಿ ತೀರ ಹಾಗೂ ಸಮುದ್ರ ತೀರದ ಭಾಗಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.