logo
WhatsApp Image 2026-04-02 at 14.46.04.jpeg
hindalco everlast.jpeg

ಆಗುಂಬೆ ಘಾಟಿ ಕಾಮಗಾರಿ ವಾಹನ ಸಂಚಾರ ನಿರ್ಬಂಧ

ಟ್ರೆಂಡಿಂಗ್
share whatsappshare facebookshare telegram
11 Mar 2022
post image

ಉಡುಪಿ, : ರಾಷ್ಟಿಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿರುವುದರಿಂದ ಕಿರಿದಾದ ರಸ್ತೆ ಇದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗದ ವಿವರ : ಲಘು ವಾಹನಗಳು, ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾ.ಹೆ 169) ಮಾರ್ಗವಾಗಿ ಹಾಗೂ ಭಾರೀ ವಾಹನಗಳು, ಉಡುಪಿ-ಕುಂದಾಪುರ-ಸಿದ್ಧಾಪುರು-ಹೊಸ0ಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಮಾರ್ಗವಾಗಿ ಸಂಚರಿಸುವ0ತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.