logo
WhatsApp Image 2026-04-02 at 14.46.04.jpeg
hindalco everlast.jpeg

ಸಾರಿಗೆ ನೌಕರರ ಮುಷ್ಕರ ವಾಪಸ್‌

ಟ್ರೆಂಡಿಂಗ್
share whatsappshare facebookshare telegram
19 Mar 2023
post image

ಬೆಂಗಳೂರು: ಕಾರ್ಮಿಕ ಮುಖಂಡ ಅನಂತ್‌ ಸುಬ್ಬರಾವ್‌ ನೇತೃತ್ವದಲ್ಲಿ ಮಾ.21ರಂದು ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ಆದರೆ, ರಾಜ್ಯ ಕೆಎಸ್‌ಆರ್‌ಟಿಸಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಬಣ ಮಾ.24ರಂದು ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ನಡೆಸುವುದಾಗಿ ತಿಳಿಸಿದೆ.

ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನುºಕುಮಾರ್‌ ಜೊತೆಗೆ ಸಾರಿಗೆ ಸಂಘಟನೆಯ ಮುಖಂಡರು ಸಭೆ ನಡೆಸಿದ್ದರು. ಈ ಹಿಂದೆ ಮುಷ್ಕರದ ವೇಳೆ ವಜಾಗೊಂಡ ನೌಕರರ ಮರು ಸೇರ್ಪಡೆ, ವಾರ್ಷಿಕ ವೇತನ ಬಡ್ತಿ ಹೆಚ್ಚಳದ ಜೊತೆಗೆ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ಸಾರಿಗೆ ಮುಷ್ಕರ ವಾಪಸ್‌ ಪಡೆಯಲಾಗಿದೆ.

4 ಸಾರಿಗೆ ನಿಗಮಗಳ ನೌಕರರ ವೇತನವನ್ನು ಶೇ.15ರಷ್ಟು ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ತಿರಸ್ಕರಿಸಿದ್ದ ಸಾರಿಗೆ ನೌಕರರ ಸಂಘಟನೆಗಳು ಅನಂತ್‌ ಸುಬ್ಬರಾವ್‌ ನೇತೃತ್ವದಲ್ಲಿ ಮುಷ್ಕರಕ್ಕೆ ಮುಂದಾಗಿದ್ದರು. ಈಗ ಸಭೆಯ ಬಳಿಕ 8 ಟ್ರೇಡ್‌ ಯೂನಿಯನ್‌ಗಳು ಕರೆ ನೀಡಿದ್ದ ಮುಷ್ಕರ ಹಿಂಪಡೆಯಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.