logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕುಂದಾಪುರ ಬೈಂದೂರು ವಲಯದ ಛಾಯಾಗ್ರಾಹಕ ಸಂಘದ ವತಿಯಿಂದ ವೀರೇಂದ್ರ ಹೆಗ್ಡೆಯವರಿಗೆ ಗೌರವ ಸಲ್ಲಿಕೆ

ಟ್ರೆಂಡಿಂಗ್
share whatsappshare facebookshare telegram
1 Aug 2022
post image

ಕುಂದಾಪುರ: ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ಯವರನ್ನು ಇಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿನ ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಡೆಯವರು ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು. ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ಆನಂದ ಬಂಟ್ವಾಳ್,ಕುಂದಾಪುರ-ಬೈಂದೂರು ವಲಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ,ಸಲಹಾ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ,ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ,ಅಮೃತ್ ಬೀಜಾಡಿ,ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.