logo
WhatsApp Image 2026-04-02 at 14.46.04.jpeg
hindalco everlast.jpeg

ಉದಯಪುರ ಘಟನೆ: ತಾಲಿಬಾನ್ ಸಂಸ್ಕೃತಿಯನ್ನು ನೆನಪಿಸುವಂತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಗಣೇಶ್

ಟ್ರೆಂಡಿಂಗ್
share whatsappshare facebookshare telegram
30 Jun 2022
post image

ಉಡುಪಿ: ನೂಪುರ್ ಶರ್ಮಾ ಹೇಳಿಕೆ ಪರವಾಗಿ ಪೋಸ್ಟ್ ಮಾಡಿದ ನೆಪವಾಗಿಟ್ಟು ರಾಜಸ್ತಾನ ಉದಯಪುರದ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ರನ್ನು ಮತಾಂಧ ಶಕ್ತಿಗಳು ತಾಲಿಬಾನ್ ಮಾದರಿಯಲ್ಲಿ ಹತ್ಯೆ ಮಾಡಿರುವ ಘಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಉಗ್ರವಾಗಿ ಖಂಡಿಸಿದ್ದಾರೆ.ರಾಜಸ್ಥಾನದ ಈ ಘಟನೆ ಹೇಯ ಕೃತ್ಯವಾಗಿದ್ದು,ಮಾನವೀಯ ಸಮಾಜ ಕ್ಷಮಿಸಲಾರದ ಘಟನೆಯಾಗಿದೆ.ತಾಲಿಬಾನ್ ಮಾದರಿಯಲ್ಲಿ ಹತ್ಯೆ ಯ ಚಿತ್ರಣ ಮಾಡಿ ದೇಶದಲ್ಲಿ ಭಯದ ವಾತಾವರಣ ಮೂಡಿಸಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿದೆ,ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ದ ತುಷ್ಟಿಕರಣ ನೀತಿಯೇ ಈ ಘಟನೆಗೆ ಕಾರಣವಾಗಿದೆ,ದೇಶದಲ್ಲಿ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಹುಸಂಖ್ಯಾತರ ಭಾವನೆಗಳ ವಿರುದ್ಧವಾಗಿ ಹೇಳಿಕೆ ನೀಡುವ ಸೆಕ್ಯುಲರ್ ಪಕ್ಷಗಳು ಮತ್ತು ವಿಚಾರವಂತ ಬುದ್ದಿ ಜೀವಿಗಳು ಈ ಘಟನೆ ಬಗ್ಗೆ ನಿಲುವೇನು?ಇಂತಹ ಮತಾಂಧ ಶಕ್ತಿಗಳನ್ನು ಏಳವೆಯಲ್ಲಿ ಮಟ್ಟ ಹಾಕುವ ಅಗತ್ಯವಿದೆ,ಈ ಜಿಹಾದಿ ಶಕ್ತಿಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ಆರೋಪಿಗಳಿಗೆ ಮರಣ ದಂಡನೆಯೇ ಸೂಕ್ತವೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.