logo
WhatsApp Image 2026-04-02 at 14.46.04.jpeg
hindalco everlast.jpeg

ಉದಯಪುರ ಘಟನೆ: ತಾಲಿಬಾನ್ ಸಂಸ್ಕೃತಿಯನ್ನು ನೆನಪಿಸುವಂತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಗಣೇಶ್

ಟ್ರೆಂಡಿಂಗ್
share whatsappshare facebookshare telegram
30 Jun 2022
post image

ಉಡುಪಿ: ನೂಪುರ್ ಶರ್ಮಾ ಹೇಳಿಕೆ ಪರವಾಗಿ ಪೋಸ್ಟ್ ಮಾಡಿದ ನೆಪವಾಗಿಟ್ಟು ರಾಜಸ್ತಾನ ಉದಯಪುರದ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ರನ್ನು ಮತಾಂಧ ಶಕ್ತಿಗಳು ತಾಲಿಬಾನ್ ಮಾದರಿಯಲ್ಲಿ ಹತ್ಯೆ ಮಾಡಿರುವ ಘಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಉಗ್ರವಾಗಿ ಖಂಡಿಸಿದ್ದಾರೆ.ರಾಜಸ್ಥಾನದ ಈ ಘಟನೆ ಹೇಯ ಕೃತ್ಯವಾಗಿದ್ದು,ಮಾನವೀಯ ಸಮಾಜ ಕ್ಷಮಿಸಲಾರದ ಘಟನೆಯಾಗಿದೆ.ತಾಲಿಬಾನ್ ಮಾದರಿಯಲ್ಲಿ ಹತ್ಯೆ ಯ ಚಿತ್ರಣ ಮಾಡಿ ದೇಶದಲ್ಲಿ ಭಯದ ವಾತಾವರಣ ಮೂಡಿಸಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿದೆ,ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ದ ತುಷ್ಟಿಕರಣ ನೀತಿಯೇ ಈ ಘಟನೆಗೆ ಕಾರಣವಾಗಿದೆ,ದೇಶದಲ್ಲಿ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಹುಸಂಖ್ಯಾತರ ಭಾವನೆಗಳ ವಿರುದ್ಧವಾಗಿ ಹೇಳಿಕೆ ನೀಡುವ ಸೆಕ್ಯುಲರ್ ಪಕ್ಷಗಳು ಮತ್ತು ವಿಚಾರವಂತ ಬುದ್ದಿ ಜೀವಿಗಳು ಈ ಘಟನೆ ಬಗ್ಗೆ ನಿಲುವೇನು?ಇಂತಹ ಮತಾಂಧ ಶಕ್ತಿಗಳನ್ನು ಏಳವೆಯಲ್ಲಿ ಮಟ್ಟ ಹಾಕುವ ಅಗತ್ಯವಿದೆ,ಈ ಜಿಹಾದಿ ಶಕ್ತಿಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ಆರೋಪಿಗಳಿಗೆ ಮರಣ ದಂಡನೆಯೇ ಸೂಕ್ತವೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.