



ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ ಸ್ಕೂಟರ್ ಕಳವುಗೈದ ಪ್ರಕರಣ ಬನ್ನಂಜೆಯ ನಾರಾಯಣಗುರು ಮಂದಿರದ ಬಳಿ ನಡೆದಿದೆ. ಕಿನ್ನಿಮೂಲ್ಕಿ ನಿವಾಸಿ ಶೈಲೇಶ್ ನಾಯಕ್ ಎಂಬವರು ತನ್ನ ಸ್ಕೂಟರ್ ಅನ್ನು ಬನ್ನಂಜೆಯ ನಾರಾಯಣಗುರು ಮಂದಿರದ ಬಳಿ ನಿಲ್ಲಿಸಿದ್ದರು. ಬಳಿಕ ಬಂದು ನೋಡಿದಾಗ ನಿಲ್ಲಿಸಿದ ಸ್ಥಳದಲ್ಲಿ ಇಲ್ಲದೆ ಇದ್ದು, ಯಾರೋ ಕಳ್ಳರು ಸ್ಕೂಟರ್ ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸ್ಕೂಟರ್ ನ ಮೌಲ್ಯ 50, ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ . ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.