



ಉಡುಪಿ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅಂಗರಕ್ಷಕ ಗಾಯಗೊಂಡ ಘಟನೆ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ. ಯಶ್ ಪಾಲ್ ಸುವರ್ಣ ಅಂಗರಕ್ಷಕ, ಕೊಡವೂರು ನಿವಾಸಿ ಗಣೇಶ್ ಅವರು ಬೈಕ್ ನಲ್ಲಿ ಅಜ್ಜರಕಾಡುನಲ್ಲಿರುವ ಯಶಪಾಲ್ ಸುವರ್ಣ ಅವರ ಮನೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಅಂಬಲಪಾಡಿ ಜಂಕ್ಷನ್ ಕಡೆಯಿಂದ ಕರಾವಳಿ ಕಡೆಗೆ ಸ್ಕೂಟರ್ ಸವಾರ ರಾಹಿಲ್ ಅನ್ವರ್ ಎಂಬಾತ ತನ್ನ ಬೈಕ್ ಅನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿಮಾಡಿಕೊಂಡು ಬಂದು ಗಣೇಶ್ಅವರ ಬೈಕ್ ಗೆ ಡಿಕ್ಕಿಹೊಡೆದಿದ್ಧಾನೆ. ಇಂದರಿಂದ ಗಾಯಗೊಂಡ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.