



ಉಡುಪಿ:
ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಪ್ರಥಮ ಯಕ್ಷಗಾನ ಸಮ್ಮೇಳನವನ್ನು ಇದೇ ಫೆಬ್ರವರಿ 11 ಮತ್ತು 12 ರಂದು ಉಡುಪಿಯಲ್ಲಿ ನಡೆಸಲು ಯೋಜಿಸಿರುತ್ತದೆ. ಈ ಸಮ್ಮೇಳನವನ್ನು ಉಡುಪಿಯ ಎ.ಎಲ್.ಎನ್.ರಾವ್ ಕ್ರೀಡಾಂಗಣ, ಎಂ.ಜಿ.ಎಂ. ನಲ್ಲಿ ನಡೆಸಲು ಎಲ್ಲ ಸಿದ್ಧತೆಗಳು ನಡೆದಿವೆ. ಸಮ್ಮೇಳನದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಕರಕುಶಲ ಪ್ರದರ್ಶನ ಮತ್ತು ಮಾರಾಟ, ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಖಾದ್ಯಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ.
ಈ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಆಸಕ್ತಿ ಉಳ್ಳವರು ವಸ್ತು ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಪಿ. ಕಿಶನ್ ಹೆಗ್ಡೆ ದೂ : 8277852555 ಅಥವಾ ಶ್ರೀ ಸುಧಾಕರ ಪೂಂಜ ದೂ : 9902206477 ಇವರನ್ನು ಸಂಪರ್ಕಿಸಲು ಕೋರಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯಲ್ಲಿ ಮಳಿಗೆಯನ್ನು ನೀಡಲಾಗುವುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.